ವಿಜಯಪುರ: ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಅಡುಗೆ ಮಾಡುವಾಗ ಸ್ಟೋವ್ ಸ್ಪೋಟಗೊಂಡು ಲಾರಿಗೆ ಬೆಂಕಿ ತಗುಲಿದೆ. ಫೈವುಡ್ ತುಂಬಿದ್ದ ಲಾರಿ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಉಣ್ಣೆಬಾವಿ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ನಡೆದಿದೆ.
ಧಾಬಾದ ಬಳಿ ತಮಿಳುನಾಡು ಮೂಲದ ಲಾರಿಯನ್ನ ನಿಲ್ಲಿಸಿ ಚಾಲಕ ಅಡುಗೆ ಮಾಡುತ್ತಿರುವಾಗ ಸ್ಟೋವ್ ಸ್ಪೋಟಗೊಂಡಿದೆ. ಸ್ಟೋವ್ ಸ್ಫೋಟಗೊಂಡ ಪರಿಣಾಮ ಪಕ್ಕದಲ್ಲಿದ್ದ ಲಾರಿಗೆ ಬೆಂಕಿ ತಗುಲಿದೆ. ಅದೇರೀತಿ ಚಾಲಕನ ಕೈ, ಕಾಲು ಮತ್ತಿತರ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಕೇರಳದಿಂದ ಸೊಲ್ಲಾಪುರಕ್ಕೆ ಹೊರಟಿದ್ದ ತಮಿಳುನಾಡು ಮೂಲದ ಲಾರಿ ಇದಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ.

